Monday, October 26, 2020

ಮುರಳೀಧರ ಉಪಾಧ್ಯ ಹಿರಿಯಡಕ - ಎಮ್. ಜಾನಕಿ ಅವರ " ಕುದುರುದ ಕೇದಗೆ " [ 2020 } ತುಳು ಕಾದಂಬರಿ M. JANAKI / TULU NOVEL

 ಪುಸ್ತಕ ಪರಿಚಯ

 

 

·        ಕುದುರುದ ಕೇದಗೆ

ಲೇ : ಎಂಜಾನಕಿ ಬ್ರಹ್ಮಾವರ

ಪ್ರ  : ಹೇಮಾಂಶು ಪ್ರಕಾಶನ,

ದೃಶ್ಯಗೊಲ್ಲಚ್ಟಿಲ್,

ದೇರೆಬೈಲು,

ಮಂಗಳೂರು - 575 006

ಮೊದಲ ಮುದ್ರಣ : 1994

ಬೆಲೆ : ರೂ.27

 

     ಶ್ರೀಮತಿ ಎಂಜಾನಕಿ ಬ್ರಹ್ಮಾವರ ಅವರ ಚೊಚ್ಚಲ ತುಳು ಕಾದಂಬರಿ- `ಕುದುರುದ ಕೇದಗೆ', ತುಳುನಾಡಿನ ಹಳ್ಳಿಯೊಂದರ ದಲಿತರ ಅಸಹಾಯಕತೆಯನ್ನು ಅನಾವರಣಗೊಳಿಸುವ  ಸಾಮಾಜಿಕ ಕಾದಂಬರಿ ತನ್ನ ಕಲಾತ್ಮಕ ಕುಸುರಿ ಕೆಲಸದಿಂದ ಗಮನ ಸೆಳೆಯುತ್ತವೆ.

     ನೀಲಕ್ಕನ ಮಗ ಶಂಕರ ನೌಕಾಪಡೆ ಯಲ್ಲಿರುವ ಯುವಕರಜೆಯಲ್ಲಿ ಊರಿಗೆ ಬಂದಿರುವ ಶಂಕರನ ಮನಸ್ಸಲ್ಲಿ ಅವನ ಬಾಲ್ಯ ಕಾಲದ ನೆನಪುಗಳು ತುಂಬಿವೆದಲಿತ ಐತನ ಮಗ ವಾಸು ಅನಾರೋಗ್ಯದಿಂದ ನರಳುತ್ತಿದ್ದಾನೆಅವನನ್ನು ಆಸ್ಪತ್ರೆಗೆ ಸೇರಿಸಿ ಗುಣಮುಖಿಯಾಗಿಸುವ ಶಂಕರನ ಪ್ರಯತ್ನ ವಿಫಲವಾಗುತ್ತದೆತನ್ನೂರಿನ ದಲಿತ ಯುವತಿ ಕುಸುಮಳ ಅಪಹರಣ ಪ್ರಯತ್ನದ ಸುಳಿವು ತಿಳಿದ ಶಂಕರ ಅವಳನ್ನುರಕ್ಷಿಸಲು ಪ್ರಯತ್ನಿಸುತ್ತಾನೆಅವನು ಕುಸುಮಳನ್ನು ಮದುವೆಯಾಗುವ ಕನಸು ಕಾಣುತ್ತಿರುವಾಗ ಅವಳ ಅಪಹರಣವಾಗುತ್ತದೆಮುಂಬಯಿಯ ಸೂಳೆಗೇರಿಯ ದಲಾಲಿಗಳು ಅವಳನ್ನು ಅಪಹರಿಸಿದರು ಎಂಬ ಸೂಚನೆ ಕಾದಂಬರಿಯಲ್ಲಿದೆಕುಸುಮಳ ತಾಯಿ ಕಮಲಕ್ಕ ಊರಿನ ಗರೋಡಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆಹತಾಶನಾದ ಶಂಕರ ತನ್ನ ಉದ್ಯೋಗಕ್ಕೆ ಹಿಂದಿರುಗುತ್ತಾನೆ.

   ಗ್ರಾಮೀಣ ಸಮಾಜದ ದಲಿತರ ಸ್ಥಿತಿ-ಗತಿ `ಕುದುರುದ ಕೇದಗೆ' ದೃಷ್ಟಿ ಕೇಂದ್ರವಾಗಿದೆಬಿಲ್ಲವ ಜಾತಿಯ ಯುವಕ ಶಂಕರನಿಗೆ ದಲಿತರ ಕುರಿತು ಪ್ರಾಮಾಣಿಕವಾದ ಸಹಾನುಭೂತಿ ಇದೆದಲಿತ ವಾಸುವಿನ ಹೆಣ ಹೊರಲು ಶಂಕರನ ಸ್ವಜಾತಿಯವರು ನಿರಾಕರಿಸುತ್ತಾರೆವಾಸುವಿನ ಸಾವಿಗೆ ಹಳ್ಳಿಯ ಜನರ ಮೂಢನಂಬಿಕೆಯೂ ಕಾರಣವಾಗಿದೆಯಕ್ಷಗಾನ ಪ್ರದರ್ಶನದಂದು ನಡೆಯುವ ಗೂಂಡಾ ಆಕ್ರಮಣದಲಿತ ಯುವತಿಯ ಅಪಹರಣಗರೋಡಿಯ ಕಾಣಿಕೆ ಡಬ್ಬಿಯಿಂದ ಕಳವುಇವು ಹಳ್ಳಿಯ ಅವಗತಿಯನ್ನು ಸೂಚಿಸುತ್ತವೆವ್ಯವಸ್ಥೆಯ ಪ್ರತಿನಿಧಿಗಳಾಗಿರುವ ಪೊಲೀಸರು ಕಮಲಕ್ಕನ `ಪೋಸ್ಟ್ ಮಾರ್ಟಮ್ಮಾಡಿಸುತ್ತಾರೆಆದರೆ ಅವರು ಕುಸುಮಳನ್ನು ಪತ್ತೆ ಹಚ್ಚಬಲ್ಲರೆಂಬ ಭರವಸೆ ಇಲ್ಲದಲಿತ ಐತ ಅಸಹಾಯಕನಾಗಿ ಊರು ಬಿಟ್ಟು ಹೋಗುತ್ತಾನೆ.

   ಕಾದಂಬರಿಯ ನಾಯಕ ಶಂಕರನ ದೃಷ್ಟಿಕೋನದ ತಂತ್ರವಿರುವ  ಕೃತಿಯಲ್ಲಿ ಹಲವು ಧ್ವನಿಪೂರ್ಣಸಾಂಕೇತಿಕ ವಿವರಗಳಿವೆಕುಸುಮಳ ಅಪಹರಣವನ್ನು ಸೂಚಿಸುವ ಹದ್ದು - ಕೋಳಿಮರಿಯ ಸಂಕೇತ ಒಂದು ಒಳ್ಳೆಯ ಉದಾಹರಣೆವಸ್ತುವಿನ ಸೀಮಿತ ಚೌಕಟ್ಟಿನಿಂದಾಗಿ  ಕೃತಿ ನೀಳ್ಗತೆ ಮತ್ತು ಕಿರುಕಾದಂಬರಿಗಳ ಗಡಿಯಲ್ಲಿ ನಿಲ್ಲುತ್ತವೆ.

   `ಕುದುರುದ ಕೇದಗೆ'ಯಲ್ಲಿ ಭರವಸೆ ಮೂಡಿಸುವ ಉದಯೋನ್ಮುಖ ತುಳು ಲೇಖಕಿಯೊಬ್ಬರು ಕಾಣಲು ಸಿಗುತ್ತಾರೆಮಹಾಲಿಂಗರ `ನಾಣಜ್ಜೆರ್ ಸುದೆ ತಿರ್ಗಾಯೆರ್ಕಾದಂಬರಿಯ ಆನಂತರ ಪ್ರಕಟವಾಗಿರುವ ಒಂದು ಗಮನಾರ್ಹ ಕಲಾತ್ಮಕ ಕೃತಿ - ``ಕುದುರುದ ಕೇದಗೆ''.